Thursday, 15 November 2012

ಅಮಾವಾಸ್ಯೆ ದಿನ - ಧನ ಲಕ್ಷ್ಮೀ ಪೂಜೆ


ಅಮಾವಾಸ್ಯೆ ದಿನ - ಧನ ಲಕ್ಷ್ಮೀ ಪೂಜೆ

ಧನಲಕ್ಷ್ಮೀ ಪೂಜೆ ಅಮಾವಾಸ್ಯೆ ದಿನ ಮಾಡುತಾರೆ. ಈ ಪೂಜೆಯನ್ನು ಸಾಯಂಕಾಲ ಮಾಡಬೇಕು. ದೇವರ ಮನೆ ಅಥವಾ ಪೂಜೆ ಮಾಡುವ ಸ್ಥಳವನ್ನು ರಂಗೋಲಿ ಹಾಕಿ ಅಲಂಕರಿಸಿ. ಲಕ್ಷ್ಮಿ ದೇವಿ ಫೋಟೋ , ಬೆಳ್ಳಿ ವಿಗ್ರಹ /ಪ್ರತಿಮೆ ಇಟ್ಟುಕೊಳ್ಳಿ. ಇದರ ಜೊತೆಗೆ ನಿಮ್ಮ ಮನೆಯಲ್ಲಿರ

ುವ ದುಡ್ಡು/ಕಾಸು/ನಾಣ್ಯಗಳು ಮತ್ತು ವಡವೆ/ಆಭರಣಗಳನ್ನೂ ದೇವರ ಜೊತೆ ಇಟ್ಟು ಪೂಜೆ ಮಾಡಿ. ಮೊದಲು ಗಣಪತಿ ಪೂಜೆ, ನಂತರ ಮಹಾಲಕ್ಷ್ಮಿ ಪೂಜೆ.

ಪೂಜಾ ವಿಧಾನ ಇಲ್ಲಿದೆ.

ಪೂಜೆ ಎಂದರೆ ಹಲವಾರು ವಿಧಿ-ವಿಧಾನಗಳು, ಮಂತ್ರಗಳು ,ಇವುಗಳ ತಲೆ-ಬುಡ ಗೊತ್ತಿಲ್ಲ ಅಂತ ಪೇಚಾಡುತ್ತ ಇದ್ದೀರಾ. ಈ ಗೊಂದಲದಲ್ಲಿ ಸಿಕ್ಕಿ ಹಾಕಿಕೊಳ್ಳ ಬೇಕಿಲ್ಲ. ಪೂಜಾ ವಿಧಾನವನ್ನು ಸರಳವಾಗಿ ವಿವರಿಸಬಹುದು. ದೇವರ ಪೂಜೆಯನ್ನು ಅತಿಥಿ ಸತ್ಕಾರಕ್ಕೆ ಹೋಲಿಸಿಕೊಳ್ಳಿ . ದೇವರು ನಿಮ್ಮ ಮನೆಗೆ ಬಂದಿರುವ ಅತಿಥಿ. ಅತಿಥಿಗಳಿಗೆ ಹೇಗೆ ಉಪಚಾರ ಮಾಡುತ್ತಿರೋ , ಹಾಗೆಯೆ ದೇವರಿಗೆ ಪೂಜೆ ರೂಪದಲ್ಲಿ ಉಪಚಾರ ಮಾಡಬೇಕು ಅಷ್ಟೆ.
ಮೊದಲು ಸಂಕಲ್ಪ ಮಾಡಿ, ನಂತರ ಧ್ಯಾನ ಮಾಡಿ ದೇವರನ್ನು ಆಹ್ವಾನ ಮಾಡುವುದು.
ಸಂಕಲ್ಪ - ಅಂದರೆ ನಿರ್ಧಾರ, ನಿರ್ಣಯ, ಚಿತ್ತ. ಈ ದಿನ ಈ ಪೂಜೆ ಮಾಡುತ್ತ ಇದ್ದೀನಿ ಅಂತ ನಿರ್ಧಾರ ಮಾಡುವುದೇ ಸಂಕಲ್ಪ. ಸಂಕಲ್ಪ ಮಾಡುವಾಗ ಆ ದಿನದ ಸಂವತ್ಸರ, ಋತು , ಮಾಸ, ಪಕ್ಷ, ವಾರ, ತಿಥಿ, ನಕ್ಷತ್ರವನ್ನು ಹೆಸರಿಸಬೇಕು. ಸಂಕಲ್ಪ ಮಂತ್ರ ಇಲ್ಲಿದೆ
ಧ್ಯಾನ - ನೀವು ಪೂಜೆ ಮಾಡುತ್ತಿರುವ ದೇವರನ್ನು ಭಕ್ತಿಯಿಂದ ಧ್ಯಾನ ಮಾಡಿ ಆವಾಹನೆ ಮಾಡುವುದು.

ಸಾಮಾನ್ಯವಾಗಿ ಷೋಡಶೋಪಚಾರದಿಂದ ಪೂಜೆ ಮಾಡಿ ಅಂತ ನೀವು ಕೇಳಿರಬಹುದು. ಷೋಡಶ ಅಂದರೆ 16. ಹದಿನಾರು ಬಗೆಯಿಂದ ದೇವರಿಗೆ ಉಪಚಾರ ಮಾಡಿ ಎಂದರ್ಥ. ಇವುಗಳ ವಿವರ ಕೆಳಗಿದೆ:
1.ಆವಾಹನೆ - ಅಂದರೆ ಆಹ್ವಾನ . ದೇವರನ್ನು ನಿಮ್ಮ ಮನೆಗೆ ಅಥವಾ ಪೂಜೆ ಮಾಡುತ್ತಿರುವ ಜಾಗಕ್ಕೆ ಆಹ್ವಾನ ಮಾಡುವುದು.

2.ಆಸನ - ಅಂದರೆ ಕುಳಿತುಕೊಳ್ಳುವ ಜಾಗ . ದೇವರ ಪ್ರತಿಮೆಯನ್ನು ಇಡುವ ವೇದಿಕೆ/ ಮಣೆ ಮೇಲೆ ಆಸೀನ ಮಾಡಿಸುವುದು.

3.ಪಾದ್ಯ - ಕಾಲು ತೊಳೆದುಕೊಳ್ಳುವುದಕ್ಕೆ ನೀರು ಕೊಡುವುದು.

4.ಅರ್ಘ್ಯ - ಕೈ ತೊಳೆದುಕೊಳ್ಳುವುದಕ್ಕೆ ನೀರು ಕೊಡುವುದು.

5.ಆಚಮನ - ಕುಡಿಯುವುದಕ್ಕೆ ನೀರು ಕೊಡುವುದು.

6.ಸ್ನಾನ - ಶುದ್ಧೋದಕ (ನೀರು) ಮತ್ತು ಪಂಚಾಮೃತದಿಂದ ಸ್ನಾನ ಮಾಡಿಸುವುದು.

7.ವಸ್ತ್ರ - ಧರಿಸಲು ಉಡುಪು ಕೊಡುವುದು . ಗೆಜ್ಜೆವಸ್ತ್ರಗಳನ್ನೂ ದೇವರಿಗೆ ಇಡುವುದು . ಜೊತೆಗೆ ಉಪವೀತ (ಜನಿವಾರ), ಆಭರಣವನ್ನು (ಬಳೆ-ಬಿಚ್ಚೋಲೆ )ಸಮರ್ಪಿಸುವುದು.

8.ಹರಿದ್ರ, ಕುಂಕುಮ, ಗಂಧ, ಅಕ್ಷತ - ಅರಿಶಿನ , ಕುಂಕುಮ, ಶ್ರೀಗಂಧ , ಮಂತ್ರಾಕ್ಷತೆಯನ್ನು ದೇವರಿಗೆ ಅರ್ಪಿಸುವುದು.

9.ಪುಷ್ಪ ಮಾಲ - ಹೂವು, ಪತ್ರೆಗಳಿಂದ ದೇವರಿಗೆ ಅಲಂಕಾರ ಮಾಡುವುದು.

10. ಅರ್ಚನೆ/ಅಷ್ಟೋತ್ತರ - ನೂರೆಂಟು ನಾಮಗಳಿಂದ ದೇವರನ್ನು ಸ್ಮರಣೆ ಮಾಡುವುದು.

11.ಧೂಪ - ಪರಿಮಳಯುಕ್ತವಾದ ಧೂಪವನ್ನು ಅರ್ಪಿಸುವುದು.

12.ದೀಪ - ದೀಪ ಸಮರ್ಪಣೆ ಮಾಡುವುದು.

13.ನೈವೇದ್ಯ, ತಾಂಬೂಲ - ದೇವರಿಗೆ ವಿಧ ವಿಧ ಭಕ್ಷ್ಯಗಳ ಭೋಜನ ಅರ್ಪಿಸುವುದು . ಊಟದ ನಂತರ ವೀಳೆಯ, ಅಡಿಕೆ, ತೆಂಗಿನಕಾಯಿ ತಾಂಬೂಲ ಕೊಡುವುದು.

14. ನೀರಾಜನ - ಕರ್ಪುರದಿಂದ ಮಂಗಳಾರತಿ ಮಾಡುವುದು.

15. ನಮಸ್ಕಾರ - ಪ್ರದಕ್ಷಿಣೆ ಮಾಡಿ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದು.

16. ಪ್ರಾರ್ಥನೆ - ನಿಮ್ಮ ಇಷ್ಟಗಳನ್ನು ನಡೆಸಿ ಕೊಡು ಎಂದು ದೇವರಲ್ಲಿ ಅರಿಕೆ / ಪ್ರಾರ್ಥನೆ ಮಾಡುವುದು. ಪೂಜೆಯ ನಂತರದೇವರು ಅನುಗ್ರಹಿಸಿರುವ ಅರಿಶಿನ, ಕುಂಕುಮ, ನೈವೇದ್ಯವನ್ನು ಪ್ರಸಾದ ರೂಪವಾಗಿ ಸ್ವೀಕಾರ ಮಾಡುವುದು.

ಪೂಜಾ ಸಾಮಗ್ರಿಗಳ ವಿವರ ಇಲ್ಲಿದೆ.

ರಂಗೋಲಿ, ಮಣೆ / ಮಂಟಪ
ದೇವರ ವಿಗ್ರಹ, ದೇವರ ಪಟ
ನಂದಾ ದೀಪ, ದೀಪದ ಕಂಭ, ತುಪ್ಪ, ಎಣ್ಣೆ, ದೀಪಕ್ಕೆ ಹಾಕುವ ಹತ್ತಿ ಬತ್ತಿ
ಘಂಟೆ, ಪಂಚಪಾತ್ರೆ, ಉದ್ದರಣೆ, ಅರ್ಘ್ಯ ಪಾತ್ರೆ, ನೀರು
ಪೂಜಾ ವಿಧಾನ ಇರುವ ಪುಸ್ತಕ /ಕ್ಯಾಸೆಟ್ / ಸಿ.ಡಿ.
ಅರಿಶಿನ, ಕುಂಕುಮ, ಮಂತ್ರಾಕ್ಷತೆ
ಶ್ರೀಗಂಧ, ಊದಿನ ಕಡ್ಡಿ
ಹೂವು, ಪತ್ರೆ, ಗೆಜ್ಜೆ ವಸ್ತ್ರ
ಪಂಚಾಮೃತ - ಹಾಲು, ಮೊಸರು, ಸಕ್ಕರೆ, ತುಪ್ಪ, ಜೇನುತುಪ್ಪ
ವೀಳ್ಯದ ಎಲೆ, ಅಡಿಕೆ, ಹಣ್ಣು , ತೆಂಗಿನಕಾಯಿ
ನೈವೇದ್ಯ - ಪಾಯಸ, ಹುಗ್ಗಿ, ಅನ್ನ, ಕೋಸಂಬರಿ , ಇತ್ಯಾದಿ
ಹಲಗಾರತಿ, ಕರ್ಪೂರ, ಮಂಗಳಾರತಿ ಬತ್ತಿ
ಆರತಿ ತಟ್ಟೆ, ಸೊಡಲು, ಹೂಬತ್ತಿ,

ಲಕ್ಷ್ಮೀ ಅಷ್ಟೂತ್ತರ ಇಲ್ಲಿದೆ.

ದೇವ್ಯುವಾಚ
ದೇವದೇವ! ಮಹಾದೇವ! ತ್ರಿಕಾಲಙ್ಞ! ಮಹೇಶ್ವರ!
ಕರುಣಾಕರ ದೇವೇಶ! ಭಕ್ತಾನುಗ್ರಹಕಾರಕ! ||
ಅಷ್ಟೋತ್ತರ ಶತಂ ಲಕ್ಷ್ಮ್ಯಾಃ ಶ್ರೋತುಮಿಚ್ಛಾಮಿ ತತ್ತ್ವತಃ ||
ಈಶ್ವರ ಉವಾಚ
ದೇವಿ! ಸಾಧು ಮಹಾಭಾಗೇ ಮಹಾಭಾಗ್ಯ ಪ್ರದಾಯಕಮ್ |
ಸರ್ವೈಶ್ವರ್ಯಕರಂ ಪುಣ್ಯಂ ಸರ್ವಪಾಪ ಪ್ರಣಾಶನಮ್ ||
ಸರ್ವದಾರಿದ್ರ್ಯ ಶಮನಂ ಶ್ರವಣಾದ್ಭುಕ್ತಿ ಮುಕ್ತಿದಮ್ |
ರಾಜವಶ್ಯಕರಂ ದಿವ್ಯಂ ಗುಹ್ಯಾದ್-ಗುಹ್ಯತರಂ ಪರಮ್ ||
ದುರ್ಲಭಂ ಸರ್ವದೇವಾನಾಂ ಚತುಷ್ಷಷ್ಟಿ ಕಳಾಸ್ಪದಮ್ |
ಪದ್ಮಾದೀನಾಂ ವರಾಂತಾನಾಂ ನಿಧೀನಾಂ ನಿತ್ಯದಾಯಕಮ್ ||
ಸಮಸ್ತ ದೇವ ಸಂಸೇವ್ಯಮ್ ಅಣಿಮಾದ್ಯಷ್ಟ ಸಿದ್ಧಿದಮ್ |
ಕಿಮತ್ರ ಬಹುನೋಕ್ತೇನ ದೇವೀ ಪ್ರತ್ಯಕ್ಷದಾಯಕಮ್ ||
ತವ ಪ್ರೀತ್ಯಾದ್ಯ ವಕ್ಷ್ಯಾಮಿ ಸಮಾಹಿತಮನಾಶ್ಶೃಣು |
ಅಷ್ಟೋತ್ತರ ಶತಸ್ಯಾಸ್ಯ ಮಹಾಲಕ್ಷ್ಮಿಸ್ತು ದೇವತಾ ||
ಕ್ಲೀಂ ಬೀಜ ಪದಮಿತ್ಯುಕ್ತಂ ಶಕ್ತಿಸ್ತು ಭುವನೇಶ್ವರೀ |
ಅಂಗನ್ಯಾಸಃ ಕರನ್ಯಾಸಃ ಸ ಇತ್ಯಾದಿ ಪ್ರಕೀರ್ತಿತಃ ||
ಧ್ಯಾನಮ್
ವಂದೇ ಪದ್ಮಕರಾಂ ಪ್ರಸನ್ನವದನಾಂ ಸೌಭಾಗ್ಯದಾಂ ಭಾಗ್ಯದಾಂ
ಹಸ್ತಾಭ್ಯಾಮಭಯಪ್ರದಾಂ ಮಣಿಗಣೈಃ ನಾನಾವಿಧೈಃ ಭೂಷಿತಾಮ್ |
ಭಕ್ತಾಭೀಷ್ಟ ಫಲಪ್ರದಾಂ ಹರಿಹರ ಬ್ರಹ್ಮಾಧಿಭಿಸ್ಸೇವಿತಾಂ
ಪಾರ್ಶ್ವೇ ಪಂಕಜ ಶಂಖಪದ್ಮ ನಿಧಿಭಿಃ ಯುಕ್ತಾಂ ಸದಾ ಶಕ್ತಿಭಿಃ ||
ಸರಸಿಜ ನಯನೇ ಸರೋಜಹಸ್ತೇ ಧವಳ ತರಾಂಶುಕ ಗಂಧಮಾಲ್ಯ ಶೋಭೇ |
ಭಗವತಿ ಹರಿವಲ್ಲಭೇ ಮನೋಙ್ಞೇ ತ್ರಿಭುವನ ಭೂತಿಕರಿ ಪ್ರಸೀದಮಹ್ಯಮ್ ||
ಓಂ
ಪ್ರಕೃತಿಂ, ವಿಕೃತಿಂ, ವಿದ್ಯಾಂ, ಸರ್ವಭೂತ ಹಿತಪ್ರದಾಮ್ |
ಶ್ರದ್ಧಾಂ, ವಿಭೂತಿಂ, ಸುರಭಿಂ, ನಮಾಮಿ ಪರಮಾತ್ಮಿಕಾಮ್ || 1 ||
ವಾಚಂ, ಪದ್ಮಾಲಯಾಂ, ಪದ್ಮಾಂ, ಶುಚಿಂ, ಸ್ವಾಹಾಂ, ಸ್ವಧಾಂ, ಸುಧಾಮ್ |
ಧನ್ಯಾಂ, ಹಿರಣ್ಯಯೀಂ, ಲಕ್ಷ್ಮೀಂ, ನಿತ್ಯಪುಷ್ಟಾಂ, ವಿಭಾವರೀಮ್ || 2 ||
ಅದಿತಿಂ ಚ, ದಿತಿಂ, ದೀಪ್ತಾಂ, ವಸುಧಾಂ, ವಸುಧಾರಿಣೀಮ್ |
ನಮಾಮಿ ಕಮಲಾಂ, ಕಾಂತಾಂ, ಕ್ಷಮಾಂ, ಕ್ಷೀರೋದ ಸಂಭವಾಮ್ || 3 ||
ಅನುಗ್ರಹಪರಾಂ, ಬುದ್ಧಿಂ, ಅನಘಾಂ, ಹರಿವಲ್ಲಭಾಮ್ |
ಅಶೋಕಾ,ಮಮೃತಾಂ ದೀಪ್ತಾಂ, ಲೋಕಶೋಕ ವಿನಾಶಿನೀಮ್ || 4 ||
ನಮಾಮಿ ಧರ್ಮನಿಲಯಾಂ, ಕರುಣಾಂ, ಲೋಕಮಾತರಮ್ |
ಪದ್ಮಪ್ರಿಯಾಂ, ಪದ್ಮಹಸ್ತಾಂ, ಪದ್ಮಾಕ್ಷೀಂ, ಪದ್ಮಸುಂದರೀಮ್ || 5 ||
ಪದ್ಮೋದ್ಭವಾಂ, ಪದ್ಮಮುಖೀಂ, ಪದ್ಮನಾಭಪ್ರಿಯಾಂ, ರಮಾಮ್ |
ಪದ್ಮಮಾಲಾಧರಾಂ, ದೇವೀಂ, ಪದ್ಮಿನೀಂ, ಪದ್ಮಗಂಧಿನೀಮ್ || 6 ||
ಪುಣ್ಯಗಂಧಾಂ, ಸುಪ್ರಸನ್ನಾಂ, ಪ್ರಸಾದಾಭಿಮುಖೀಂ, ಪ್ರಭಾಮ್ |
ನಮಾಮಿ ಚಂದ್ರವದನಾಂ, ಚಂದ್ರಾಂ, ಚಂದ್ರಸಹೋದರೀಮ್ || 7 ||
ಚತುರ್ಭುಜಾಂ, ಚಂದ್ರರೂಪಾಂ, ಇಂದಿರಾ,ಮಿಂದುಶೀತಲಾಮ್ |
ಆಹ್ಲಾದ ಜನನೀಂ, ಪುಷ್ಟಿಂ, ಶಿವಾಂ, ಶಿವಕರೀಂ, ಸತೀಮ್ || 8 ||
ವಿಮಲಾಂ, ವಿಶ್ವಜನನೀಂ, ತುಷ್ಟಿಂ, ದಾರಿದ್ರ್ಯ ನಾಶಿನೀಮ್ |
ಪ್ರೀತಿ ಪುಷ್ಕರಿಣೀಂ, ಶಾಂತಾಂ, ಶುಕ್ಲಮಾಲ್ಯಾಂಬರಾಂ, ಶ್ರಿಯಮ್ || 9 ||
ಭಾಸ್ಕರೀಂ, ಬಿಲ್ವನಿಲಯಾಂ, ವರಾರೋಹಾಂ, ಯಶಸ್ವಿನೀಮ್ |
ವಸುಂಧರಾ, ಮುದಾರಾಂಗಾಂ, ಹರಿಣೀಂ, ಹೇಮಮಾಲಿನೀಮ್ || 10 ||
ಧನಧಾನ್ಯಕರೀಂ, ಸಿದ್ಧಿಂ, ಸ್ರೈಣಸೌಮ್ಯಾಂ, ಶುಭಪ್ರದಾಮ್ |
ನೃಪವೇಶ್ಮ ಗತಾನಂದಾಂ, ವರಲಕ್ಷ್ಮೀಂ, ವಸುಪ್ರದಾಮ್ || 11 ||
ಶುಭಾಂ, ಹಿರಣ್ಯಪ್ರಾಕಾರಾಂ, ಸಮುದ್ರತನಯಾಂ, ಜಯಾಮ್ |
ನಮಾಮಿ ಮಂಗಳಾಂ ದೇವೀಂ, ವಿಷ್ಣು ವಕ್ಷಃಸ್ಥಲ ಸ್ಥಿತಾಮ್ || 12 ||
ವಿಷ್ಣುಪತ್ನೀಂ, ಪ್ರಸನ್ನಾಕ್ಷೀಂ, ನಾರಾಯಣ ಸಮಾಶ್ರಿತಾಮ್ |
ದಾರಿದ್ರ್ಯ ಧ್ವಂಸಿನೀಂ, ದೇವೀಂ, ಸರ್ವೋಪದ್ರವ ವಾರಿಣೀಮ್ || 13 ||
ನವದುರ್ಗಾಂ, ಮಹಾಕಾಳೀಂ, ಬ್ರಹ್ಮ ವಿಷ್ಣು ಶಿವಾತ್ಮಿಕಾಮ್ |
ತ್ರಿಕಾಲಙ್ಞಾನ ಸಂಪನ್ನಾಂ, ನಮಾಮಿ ಭುವನೇಶ್ವರೀಮ್ || 14 ||
ಲಕ್ಷ್ಮೀಂ ಕ್ಷೀರಸಮುದ್ರರಾಜ ತನಯಾಂ ಶ್ರೀರಂಗಧಾಮೇಶ್ವರೀಮ್ |
ದಾಸೀಭೂತ ಸಮಸ್ತದೇವ ವನಿತಾಂ ಲೋಕೈಕ ದೀಪಾಂಕುರಾಮ್ ||
ಶ್ರೀಮನ್ಮಂದ ಕಟಾಕ್ಷ ಲಬ್ಧ ವಿಭವದ್-ಬ್ರಹ್ಮೇಂದ್ರ ಗಂಗಾಧರಾಮ್ |
ತ್ವಾಂ ತ್ರೈಲೋಕ್ಯ ಕುಟುಂಬಿನೀಂ ಸರಸಿಜಾಂ ವಂದೇ ಮುಕುಂದಪ್ರಿಯಾಮ್ || 15 ||
ಮಾತರ್ನಮಾಮಿ! ಕಮಲೇ! ಕಮಲಾಯತಾಕ್ಷಿ!
ಶ್ರೀ ವಿಷ್ಣು ಹೃತ್-ಕಮಲವಾಸಿನಿ! ವಿಶ್ವಮಾತಃ!
ಕ್ಷೀರೋದಜೇ ಕಮಲ ಕೋಮಲ ಗರ್ಭಗೌರಿ!
ಲಕ್ಷ್ಮೀ! ಪ್ರಸೀದ ಸತತಂ ಸಮತಾಂ ಶರಣ್ಯೇ || 16 ||
ತ್ರಿಕಾಲಂ ಯೋ ಜಪೇತ್ ವಿದ್ವಾನ್ ಷಣ್ಮಾಸಂ ವಿಜಿತೇಂದ್ರಿಯಃ |
ದಾರಿದ್ರ್ಯ ಧ್ವಂಸನಂ ಕೃತ್ವಾ ಸರ್ವಮಾಪ್ನೋತ್-ಯಯತ್ನತಃ |
ದೇವೀನಾಮ ಸಹಸ್ರೇಷು ಪುಣ್ಯಮಷ್ಟೋತ್ತರಂ ಶತಮ್ |
ಯೇನ ಶ್ರಿಯ ಮವಾಪ್ನೋತಿ ಕೋಟಿಜನ್ಮ ದರಿದ್ರತಃ || 17 ||
ಭೃಗುವಾರೇ ಶತಂ ಧೀಮಾನ್ ಪಠೇತ್ ವತ್ಸರಮಾತ್ರಕಮ್ |
ಅಷ್ಟೈಶ್ವರ್ಯ ಮವಾಪ್ನೋತಿ ಕುಬೇರ ಇವ ಭೂತಲೇ ||
ದಾರಿದ್ರ್ಯ ಮೋಚನಂ ನಾಮ ಸ್ತೋತ್ರಮಂಬಾಪರಂ ಶತಮ್ |
ಯೇನ ಶ್ರಿಯ ಮವಾಪ್ನೋತಿ ಕೋಟಿಜನ್ಮ ದರಿದ್ರತಃ || 18 ||
ಭುಕ್ತ್ವಾತು ವಿಪುಲಾನ್ ಭೋಗಾನ್ ಅಂತೇ ಸಾಯುಜ್ಯಮಾಪ್ನುಯಾತ್ |
ಪ್ರಾತಃಕಾಲೇ ಪಠೇನ್ನಿತ್ಯಂ ಸರ್ವ ದುಃಖೋಪ ಶಾಂತಯೇ |
ಪಠಂತು ಚಿಂತಯೇದ್ದೇವೀಂ ಸರ್ವಾಭರಣ ಭೂಷಿತಾಮ್ || 19 ||
ಇತಿ ಶ್ರೀ ಲಕ್ಷ್ಮೀ ಅಷ್ಟೋತ್ತರ ಶತನಾಮ ಸ್ತೋತ್ರಂ ಸಂಪೂರ್ಣಮ್

ಯಾವುದಾದರು ಸಿಹಿ ತಿಂಡಿ ಮಾಡಿ, ದೇವಿಗೆ ನೈವೇದ್ಯ ಮಾಡಿ. ಪೂಜೆಯ ನಂತರ ಇದನ್ನು ಪ್ರಸಾದವಾಗಿ ಸ್ವೀಕರಿಸಿ. ಸಕಲ ಐಶ್ವರ್ಯ ಸಂಪತ್ತನ್ನು ಕರುಣಿಸಿ ಎಂದು ಭಕ್ತಿಯಿಂದ ಲಕ್ಷ್ಮಿಯನ್ನು ಪ್ರಾರ್ಥಿಸಿ

No comments:

Post a Comment